ಕೆನಡಾ ಪಾರ್ಲಿಮೆಂಟ್ನಲ್ಲಿ ಕಸ್ತೂರಿ ಕನ್ನಡ! ಇದು ಭಾವುಕ ಕ್ಷಣ ಸಿರಿವಂತ | ಮಾಹಿತಿ ವೇದಿಕೆ competitive exams
ಕೆನಡಾ ಪಾರ್ಲಿಮೆಂಟ್ನಲ್ಲಿ ಕಸ್ತೂರಿ ಕನ್ನಡ! ಇದು ಭಾವುಕ ಕ್ಷಣ
ಸಿರಿವಂತರ ಮಹಲುಗಳಲ್ಲಿ ಬಡವರಿರುವ ಗುಡಿಸಲಲ್ಲಿ ಬೇಸಾಯದ ಕಾಯಕದಲ್ಲಿ ಕಾರ್ಖಾನೆ ಯಂತ್ರಗಳಲ್ಲಿ ಕೇಳಲಿ, ಮತ್ತೊಮ್ಮೆ ಕೇಳಲಿ ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ.... ಕೆನಡಾದ ಸಂಸತ್ತಿನಲ್ಲಿ ಕನ್ನಡದ ಮಾತು ಕೇಳಿಬಂದಿದೆ.ನಾನು ನನ್ನ ಮಾತೃಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದು ಮಾತು ಪ್ರಾರಂಭಿಸಿದ ಚಂದ್ರ ಆರ್ಯ ಅವರು ಕೆನಡಾ ಪಾರ್ಲಿಮೆಂಟ್ನಲ್ಲಿ ಇದೇ ಮೊದಲ ಬಾರಿ ಕನ್ನಡ ಮಾತನಾಡಿದ್ದಾರೆ. ಕೆನಡಾ ಸಂಸತ್ ಸದಸ್ಯರಾಗಿ ಆಯ್ಕೆಯಾಗಿರುವ ಚಂದ್ರ ಆರ್ಯ ಹೆಮ್ಮೆಯಿಂದ ಕನ್ನಡದಲ್ಲಿ ಮಾತನಾಡಿರುವುದು ಈಗ ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.